2 Corinthians 7:10 in Kannada

Kannada Kannada Bible 2 Corinthians 2 Corinthians 7 2 Corinthians 7:10

2 Corinthians 7:10
ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.

2 Corinthians 7:92 Corinthians 72 Corinthians 7:11

2 Corinthians 7:10 in Other Translations

King James Version (KJV)
For godly sorrow worketh repentance to salvation not to be repented of: but the sorrow of the world worketh death.

American Standard Version (ASV)
For godly sorrow worketh repentance unto salvation, `a repentance' which bringeth no regret: but the sorrow of the world worketh death.

Bible in Basic English (BBE)
For the sorrow which God gives is the cause of salvation through a change of heart, in which there is no reason for grief: but the sorrow of the world is a cause of death.

Darby English Bible (DBY)
For grief according to God works repentance to salvation, never to be regretted; but the grief of the world works death.

World English Bible (WEB)
For godly sorrow works repentance to salvation, which brings no regret. But the sorrow of the world works death.

Young's Literal Translation (YLT)
for the sorrow toward God reformation to salvation not to be repented of doth work, and the sorrow of the world doth work death,

For
ay
godly
γὰρgargahr

κατὰkataka-TA
sorrow
θεὸνtheonthay-ONE
worketh
λύπηlypēLYOO-pay
repentance
μετάνοιανmetanoianmay-TA-noo-an
to
εἰςeisees
salvation
σωτηρίανsōtēriansoh-tay-REE-an
of:
repented
be
to
not
ἀμεταμέλητονametamelētonah-may-ta-MAY-lay-tone

κατεργάζεταιkatergazetaika-tare-GA-zay-tay
but
ay
the
δὲdethay
sorrow
τοῦtoutoo
of
the
κόσμουkosmouKOH-smoo
world
λύπηlypēLYOO-pay
worketh
θάνατονthanatonTHA-na-tone
death.
κατεργάζεται·katergazetaika-tare-GA-zay-tay

Cross Reference

Acts 11:18
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.

2 Samuel 12:13
ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.

2 Timothy 2:25
ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.

Acts 3:19
ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.

1 Kings 8:47
ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ

Proverbs 17:22
ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.

Luke 15:10
ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.

Luke 18:13
ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.

2 Corinthians 12:21
ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.

Hebrews 12:17
ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.

Matthew 27:4
ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.

Matthew 26:75
ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.

Matthew 21:28
ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.

Jonah 4:9
ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.

Jonah 3:10
ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.

Jonah 3:8
ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ.

Genesis 4:13
ಆಗ ಕಾಯಿನನು ಕರ್ತನಿಗೆ--ನನ್ನ ಶಿಕ್ಷೆಯು ನಾನು ತಾಳಲಾರದಷ್ಟು ದೊಡ್ಡದಾಗಿದೆ.

Genesis 30:1
ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು.

1 Samuel 30:6
ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.

2 Samuel 13:4
ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು.

2 Samuel 17:23
ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.

1 Kings 21:4
ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.

Job 33:27
ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;

Proverbs 15:13
ಸಂತೋಷಪಡುವ ಹೃದ ಯವು ಕಾಂತಿಯುಳ್ಳ ಮುಖಭಾವ ತೋರುವದು; ಹೃದಯ ವೇದನೆಯಿಂದ ಆತ್ಮವು ಕುಂದಿಹೋಗುತ್ತದೆ.

Proverbs 18:14
ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು?

Jeremiah 31:9
ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.

Ezekiel 7:16
ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು.

Ezekiel 18:27
ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು.

Proverbs 15:15
ಬಾಧಿತರ ದಿನಗಳೆಲ್ಲವೂ ಕೆಟ್ಟ ವುಗಳೇ. ಸಂತೋಷ ಹೃದಯವುಳ್ಳವನಿಗೆ ನಿತ್ಯವೂ ಔತಣ.