Genesis 47:13-26 in Kannada

Genesis 47:13
ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್‌ದೇಶವೂ ಕ್ಷಾಮದಿಂದ ಕ್ಷೀಣವಾದವು.

Genesis 47:14
ಆಗ ಯೋಸೇಫನು ಐಗುಪ್ತದೇಶದಲ್ಲಿಯೂ ಕಾನಾನ್‌ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ ಅದನ್ನು ಫರೋಹನ ಮನೆಗೆ ತಂದನು.

Genesis 47:15
ಐಗುಪ್ತ ದೇಶದಲ್ಲಿಯೂ ಕಾನಾನ್‌ದೇಶದಲ್ಲಿಯೂ ಹಣವು ಮುಗಿದಾಗ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು--ನಮಗೆ ರೊಟ್ಟಿಯನ್ನು ಕೊಡು, ನಾವು ನಿನ್ನ ಮುಂದೆ ಯಾಕೆ ಸಾಯಬೇಕು? ಯಾಕಂದರೆ ಹಣವೆಲ್ಲಾ ತೀರಿತು ಅಂದರು.

Genesis 47:16
ಆಗ ಯೋಸೇಫ ನು--ನಿಮ್ಮ ದನಗಳನ್ನು ತಕ್ಕೊಂಡು ಬನ್ನಿರಿ, ಹಣ ತೀರಿದ್ದೇಯಾದರೆ ನಿಮ್ಮ ದನಗಳಿಗೆ ಬದಲಾಗಿ (ಧಾನ್ಯವನ್ನು) ಕೊಡುತ್ತೇನೆ ಅಂದನು.

Genesis 47:17
ಆಗ ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತಂದರು. ಯೋಸೇಫನು ಅವರ ಕುದುರೆ ಮಂದೆ ದನ ಕತ್ತೆ ಇವುಗಳ ಬದಲಾಗಿ ರೊಟ್ಟಿಯನ್ನು ಕೊಟ್ಟು. ಆ ವರುಷವೆಲ್ಲಾ ಅವರನ್ನು ಪೋಷಿಸಿದನು.

Genesis 47:18
ಆ ವರುಷವಾದ ಮೇಲೆ ಎರಡನೆಯ ವರುಷದಲ್ಲಿ ಅವರು ಅವನ ಬಳಿಗೆ ಬಂದು ಅವನಿಗೆ--ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವದರಿಂದ ನಮ್ಮ ಶರೀರಗಳೂ ಭೂಮಿಗಳೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬದನ್ನು ನಮ್ಮ ಒಡೆಯನಿಗೆ ಮರೆಮಾಡುವದಿಲ್ಲ.

Genesis 47:19
ನಾವೂ ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವದು ಯಾಕೆ? ನಮ್ಮನ್ನೂ ನಮ್ಮ ಭೂಮಿಯನ್ನೂ ರೊಟ್ಟಿಗೆ ಕೊಂಡುಕೋ. ಆಗ ನಮ್ಮ ಭೂಮಿಯು ಫರೋಹನ ವಶವಾಗಿ ನಾವು ಅವನಿಗೆ ಗುಲಾಮರಾಗಿರುವೆವು. ನಮಗೆ ಬೀಜವನ್ನು ಕೊಡು; ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವದು ಅಂದರು.

Genesis 47:20
ಆಗ ಯೋಸೇಫನು ಐಗುಪ್ತದೇಶ ವನ್ನೆಲ್ಲಾ ಫರೋಹನಿಗಾಗಿ ಕೊಂಡುಕೊಂಡನು. ಹೇಗಂದರೆ, ಬರವು ಅವರಿಗೆ ಕಠಿಣವಾಗಿದ್ದರಿಂದ ಐಗುಪ್ತ್ಯರು ತಮ್ಮತಮ್ಮ ಹೊಲಗಳನ್ನು ಮಾರಿಬಿಟ್ಟರು

Genesis 47:21
ಹೀಗೆ ಭೂಮಿಯು ಫರೋಹನದಾಯಿತು. ಅವನು ಜನರನ್ನು ಐಗುಪ್ತದ ಒಂದು ಮೇರೆಯಿಂದ ಇನ್ನೊಂದು ಮೇರೆಯ ವರೆಗೆ ಇದ್ದ ಪಟ್ಟಣಗಳಲ್ಲಿ ಸೇರಿಸಿದನು.

Genesis 47:22
ವೈದಿಕರ ಭೂಮಿಯನ್ನು ಮಾತ್ರ ಅವನು ಕೊಂಡು ಕೊಳ್ಳಲಿಲ್ಲ. ಯಾಕಂದರೆ ಫರೋಹನು ವೈದಿಕರಿಗೆ ಭಾಗಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು ಅವರು ಊಟಮಾಡುತ್ತಿದ್ದರು; ಆದ ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.

Genesis 47:23
ಆಗ ಯೋಸೇಫನು ಜನರಿಗೆ--ಇಗೋ, ಇಂದು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಗೋ, ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜಬಿತ್ತಿರಿ.

Genesis 47:24
ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.

Genesis 47:25
ಆಗ ಅವರು--ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ಕೃಪೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು ಅಂದರು.

Genesis 47:26
ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬದನ್ನು ಐಗುಪ್ತದ ಭೂಮಿಗೆ ಇಂದಿನ ವರೆಗೂ ನೇಮಕಮಾಡಿ ಸ್ಥಾಪಿಸಿ ದನು. ವೈದಿಕರ ಭೂಮಿಯು ಮಾತ್ರ ಫರೋಹ ನದಾಗಲಿಲ್ಲ.

Kannada Bible