John 2:11 in Kannada

Kannada Kannada Bible John John 2 John 2:11

John 2:11
ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.

John 2:10John 2John 2:12

John 2:11 in Other Translations

King James Version (KJV)
This beginning of miracles did Jesus in Cana of Galilee, and manifested forth his glory; and his disciples believed on him.

American Standard Version (ASV)
This beginning of his signs did Jesus in Cana of Galilee, and manifested his glory; and his disciples believed on him.

Bible in Basic English (BBE)
This, the first of his signs, Jesus did at Cana in Galilee and let his glory be seen openly; and his disciples put their faith in him.

Darby English Bible (DBY)
This beginning of signs did Jesus in Cana of Galilee, and manifested his glory; and his disciples believed on him.

World English Bible (WEB)
This beginning of his signs Jesus did in Cana of Galilee, and revealed his glory; and his disciples believed in him.

Young's Literal Translation (YLT)
This beginning of the signs did Jesus in Cana of Galilee, and manifested his glory, and his disciples believed in him;

This
ΤαύτηνtautēnTAF-tane

ἐποίησενepoiēsenay-POO-ay-sane
beginning
τὴνtēntane
of

ἀρχὴνarchēnar-HANE
miracles
τῶνtōntone
did
σημείωνsēmeiōnsay-MEE-one

hooh
Jesus
Ἰησοῦςiēsousee-ay-SOOS
in
ἐνenane
Cana
Κανὰkanaka-NA
of

τῆςtēstase
Galilee,
Γαλιλαίαςgalilaiasga-lee-LAY-as
and
καὶkaikay
manifested
forth
ἐφανέρωσενephanerōsenay-fa-NAY-roh-sane
his
τὴνtēntane

δόξανdoxanTHOH-ksahn
glory;
αὐτοῦautouaf-TOO
and
καὶkaikay
his
ἐπίστευσανepisteusanay-PEE-stayf-sahn

εἰςeisees
disciples
αὐτὸνautonaf-TONE
believed
οἱhoioo
on
μαθηταὶmathētaima-thay-TAY
him.
αὐτοῦautouaf-TOO

Cross Reference

John 20:30
ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲ.

John 1:14
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).

John 3:2
ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.

John 6:30
ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?

John 11:15
ನೀವು ನಂಬು ವಂತೆ ನಿಮಗೋಸ್ಕರ ನಾನು ಅಲ್ಲಿ ಇಲ್ಲದಿರುವದಕ್ಕೆ ಸಂತೋಷಪಡುತ್ತೇನೆ; ಹೇಗೂ ನಾವು ಅವನ ಬಳಿಗೆ ಹೋಗೋಣ ಎಂದು ಅವರಿಗೆ ಹೇಳಿದನು.

John 12:37
ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.

John 12:41
ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.

John 14:9
ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?

John 14:13
ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.

2 Corinthians 3:18
ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.

2 Corinthians 4:6
ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.

2 Corinthians 4:17
ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.

Galatians 3:10
ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.

1 John 5:13
ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.

John 6:26
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.

John 6:14
ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು.

Exodus 7:19
ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು.

Deuteronomy 5:24
ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ.

Psalm 72:19
ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್‌. ಆಮೆನ್‌.

Psalm 96:3
ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.

Ecclesiastes 9:7
ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.

Isaiah 40:5
ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.

Malachi 2:2
ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.

John 1:17
ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.

John 1:50
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಆ ಅಂಜೂರ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ಹೇಳಿದ್ದರಿಂದ ನೀನು ನಂಬು ತ್ತೀಯೋ? ನೀನು ಇವುಗಳಿಗಿಂತ ಮಹತ್ತಾದವುಗಳನ್ನು ನೋಡುವಿ ಅಂದನು.

John 2:23
ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.

John 4:46
ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.

John 5:23
ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.

John 6:2
ಆಗ ಆತನು ರೋಗಿಗಳಲ್ಲಿ ನಡಿಸಿದ ಆತನ ಅದ್ಭುತ ಕಾರ್ಯಗಳನ್ನು ನೋಡಿದ ಜನರ ದೊಡ್ಡ ಸಮೂಹವು ಆತನನ್ನು ಹಿಂಬಾಲಿಸುತ್ತಿತ್ತು.

Exodus 4:9
ಆ ಎರಡೂ ಮಹತ್ಕಾರ್ಯ ಗಳನ್ನು ಅವರು ನಂಬದೆಯೂ ನಿನ್ನ ಮಾತನ್ನು ಕೇಳ ದೆಯೂ ಹೋದರೆ ನದಿಯ ನೀರನ್ನು ತೆಗೆದು ಒಣಗಿದ ನೆಲದಮೇಲೆ ಸುರಿಯಬೇಕು. ಆಗ ನೀನು ನದಿಯಿಂದ ತೆಗೆದ ನೀರು ಒಣಗಿದ ನೆಲದ ಮೇಲೆ ರಕ್ತವಾಗುವದು ಅಂದನು.