Skip to content
TAMIL CHRISTIAN SONGS .IN
TAMIL CHRISTIAN SONGS .IN
  • Lyrics
  • Chords
  • Bible
  • /
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z

Index
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z
Matthew 4 KJV ASV BBE DBY WBT WEB YLT

Matthew 4 in Kannada WBT Compare Webster's Bible

Matthew 4

1 1 ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು.

2 ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.

3 ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.

4 ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.

5 ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ--

6 ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ

7 ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.

8 ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ--

9 ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು.

10 ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.

11 ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.

12 ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು.

13 ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್‌, ನೆಫ್ತಲೀಮ್‌ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.

14 ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ--

15 ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್‌ ಪ್ರಾಂತ್ಯದಲ್ಲಿಯೂ ನೆಫ್ತಲೀಮ್‌ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ

16 ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.

17 ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.

18 ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.

19 ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು.

20 ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.

21 ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.

22 ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.

23 ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.

24 ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.

25 ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.

  • Tamil
  • Hindi
  • Malayalam
  • Telugu
  • Kannada
  • Gujarati
  • Punjabi
  • Bengali
  • Oriya
  • Nepali

By continuing to browse the site, you are agreeing to our use of cookies.

Close