Matthew 14:3-35 in Kannada
Matthew 14:3
ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು.
Matthew 14:4
ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು.
Matthew 14:5
ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
Matthew 14:6
ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು.
Matthew 14:7
ಆದದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅವನು ಆಣೆಯಿಟ್ಟು ವಾಗ್ದಾನಮಾಡಿದನು.
Matthew 14:8
ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು.
Matthew 14:9
ಆಗ ಅರಸನು ದುಃಖಪಟ್ಟಾಗ್ಯೂ ತನ್ನ ಆಣೆಯ ನಿಮಿತ್ತದಿಂದಲೂ ತನ್ನೊಂದಿಗೆ ಊಟಕ್ಕೆ ಕೂತಿದ್ದವರ ನಿಮಿತ್ತದಿಂದಲೂ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.
Matthew 14:10
ಮತ್ತು ಅವನು (ಆಳುಗಳನ್ನು) ಕಳುಹಿಸಿ ಸೆರೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು.
Matthew 14:11
ಇದಲ್ಲದೆ ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.
Matthew 14:12
ಆಗ ಅವನ ಶಿಷ್ಯರು ಬಂದು ದೇಹವನ್ನೆತ್ತಿಕೊಂಡು ಹೂಣಿಟ್ಟು ಹೋಗಿ ಯೇಸುವಿಗೆ ತಿಳಿಸಿದರು.
Matthew 14:13
ಯೇಸು ಆ ವಿಷಯವನ್ನು ಕೇಳಿದಾಗ ದೋಣಿ ಯನ್ನು ಹತ್ತಿ ಅಲ್ಲಿಂದ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಹೊರಟುಹೋದನು. ಇದನ್ನು ಕೇಳಿ ಜನರು ಪಟ್ಟಣ ಗಳಿಂದ ಕಾಲು ನಡಿಗೆಯಾಗಿ ಆತನನ್ನು ಹಿಂಬಾಲಿ ಸಿದರು.
Matthew 14:14
ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
Matthew 14:15
ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು.
Matthew 14:16
ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು.
Matthew 14:17
ಅವರು ಆತನಿಗೆ--ನಮ್ಮ ಹತ್ತಿರ ಐದು ರೊಟ್ಟಿ ಎರಡು ಮಾನುಗಳು ಮಾತ್ರ ಇವೆ ಎಂದು ಹೇಳಿದರು.
Matthew 14:18
ಆತನು--ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.
Matthew 14:19
ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
Matthew 14:20
ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು.
Matthew 14:21
ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು.
Matthew 14:22
ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.
Matthew 14:23
ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು.
Matthew 14:24
ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು.
Matthew 14:25
ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು.
Matthew 14:26
ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು.
Matthew 14:27
ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು.
Matthew 14:28
ಆಗ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನೇ ಆಗಿದ್ದರೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರಲು ನನಗೆ ಅಪ್ಪಣೆಕೊಡು ಅಂದನು.
Matthew 14:29
ಅದಕ್ಕಾತನು--ಬಾ ಅಂದನು. ಆಗ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ಹೋಗು ವದಕ್ಕಾಗಿ ನೀರಿನ ಮೇಲೆ ನಡೆದನು.
Matthew 14:30
ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು.
Matthew 14:31
ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು.
Matthew 14:32
ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು.
Matthew 14:33
ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
Matthew 14:34
ಅವರು ದಾಟಿ ಗೆನೆಜರೇತ್ ಸೀಮೆಗೆ ಬಂದರು.
Matthew 14:35
ಆಗ ಅಲ್ಲಿದ್ದ ಜನರು ಆತನ ಗುರುತು ಹಿಡಿದು ಸುತ್ತ ಮುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ರೋಗಿಗಳ ನ್ನೆಲ್ಲಾ ಆತನ ಬಳಿಗೆ ತಂದರು.
Kannada Bible